ADVERTISEMENT

ವಾಹನ ನಿಯಮ ಉಲ್ಲಂಘನೆ: ಬಜೆಟ್ ಬಳಿಕ ದಂಡದ ಮೊತ್ತ ಹೆಚ್ಚಳ –ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2020, 10:43 IST
Last Updated 12 ಫೆಬ್ರುವರಿ 2020, 10:43 IST
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ   

ಬೆಂಗಳೂರು: ವಾಹನಗಳ ಸಂಚಾರ ನಿಯಮ ಉಲ್ಲಂಘನೆ ದಂಡ ಶುಲ್ಕವನ್ನು ಹೆಚ್ಚಿಸಲಾಗುವುದು ಎಂದು ಉಪಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬುಧವಾರ ಹೇಳಿದರು.

ತಮ್ಮನ್ನು ಭೇಟಿಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ ದಂಡ ಶುಲ್ಕವನ್ನು ಪರಿಷ್ಕರಿಸಿ, ಹೆಚ್ಚಳ ಮಾಡಿತ್ತು. ಆದರೆ ಜನರಿಗೆ ಹೊರೆಯಾಗುತ್ತದೆ ಎಂಬ ಕಾರಣಕ್ಕೆ ಕಡಿಮೆ ಮಾಡಲಾಗಿತ್ತು. ಬಜೆಟ್ ಮಂಡನೆ ನಂತರ ಕೇಂದ್ರ ರೂಪಿಸಿರುವ ನಿಯಮದ ಪ್ರಕಾರವೇ ದಂಡ ವಿಧಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT