ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸುವ ದಂಡದ ಪ್ರಮಾಣವನ್ನು ರಾಜ್ಯ ಸರ್ಕಾರ ಈ ವಾರಾಂತ್ಯದಲ್ಲಿ ಪರಿಷ್ಕರಿಸಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.
ಗುಜರಾತ್ ರಾಜ್ಯ ಪರಿಷ್ಕರಿಸಿರುವ ದಂಡ ಪ್ರಮಾಣದ ಆದೇಶ ಪ್ರತಿಯನ್ನು ತರಿಸಿಕೊಂಡು ಕಾನೂನು ಇಲಾಖೆಯ ಪರಿಶೀಲನೆಗೆ ನೀಡಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ‘ಪ್ರಜಾವಾಣಿ’ ತಿಳಿಸಿದರು. ಬುಧವಾರ ಅಥವಾ ಗುರುವಾರ ಕಾನೂನು ಇಲಾಖೆ ತನ್ನ ಅಭಿಪ್ರಾಯ ತಿಳಿಸುವ ಸಾಧ್ಯತೆ ಇದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.