ADVERTISEMENT

ಬೆಳಗಾವಿ, ಮೈಸೂರಿಗೆ ನಾಳೆಯಿಂದ ರೈಲು

​ಪ್ರಜಾವಾಣಿ ವಾರ್ತೆ
Published 21 ಮೇ 2020, 5:44 IST
Last Updated 21 ಮೇ 2020, 5:44 IST
ರೈಲು ಹತ್ತುತ್ತಿರುವ ಪ್ರಯಾಣಿಕರು (ಸಂಗ್ರಹ ಚಿತ್ರ)
ರೈಲು ಹತ್ತುತ್ತಿರುವ ಪ್ರಯಾಣಿಕರು (ಸಂಗ್ರಹ ಚಿತ್ರ)   

ಬೆಳಗಾವಿ: ‘ರಾಜ್ಯದಲ್ಲಿ ಮೇ 22ರಿಂದ ಪ್ರಾಯೋಗಿಕವಾಗಿ 2 ವಿಶೇಷ ರೈಲುಗಳ ಸಂಚಾರ ಪ್ರಾರಂಭಿಸಲಾಗುವುದು’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.

‘ಬೆಂಗಳೂರು–ಹುಬ್ಬಳ್ಳಿ–ಬೆಳಗಾವಿ ಹಾಗೂ ಮೈಸೂರಿನಿಂದ ಬೆಂಗಳೂರಿಗೆ ಈ ವಿಶೇಷ ರೈಲುಗಳು ಸಂಚರಿಸಲಿವೆ’ ಎಂದರು.

‘ಮೊದಲಿನಂತೆ ರೈಲು ನಿಲ್ದಾಣಕ್ಕೆ ಬಂದು ಜಮಾಯಿಸಬಾರದು. ಕಡ್ಡಾಯವಾಗಿ ಆನ್‌ಲೈನ್‌ನಲ್ಲಿಯೇ ಟಿಕೆಟ್ ಬುಕ್‌ ಮಾಡಬೇಕು. ಸೀಟು ಲಭ್ಯವಾಗುವುದು ದೃಢಪಟ್ಟ ಬಳಿಕವೇ ನಿಲ್ದಾಣಕ್ಕೆ ಬರಬೇಕು’ ಎಂದು ತಿಳಿಸಿದರು.

ADVERTISEMENT

‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನವಿ ಮೇರೆಗೆ ರೈಲುಗಳ ಸಂಚಾರ ಆರಂಭಿಸುತ್ತಿದ್ದೇವೆ. ಜನರು ಅಂತರ ಕಾಪಾಡಿಕೊಳ್ಳಬೇಕು. ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸಂಚರಿಸಬೇಕು’ ಎಂದು ಇಲ್ಲಿ ಬುಧವಾರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.