ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ತರಬೇತಿ ಅವಧಿಯನ್ನು ಎರಡು ವರ್ಷಗಳಿಂದ ಒಂದು ವರ್ಷಕ್ಕೆ ಇಳಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
2021ರ ಜುಲೈನಿಂದ ಈ ಆದೇಶ ಜಾರಿಗೆ ಬರಲಿದೆ. ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯವ್ಯ ಹಾಗೂ ಈಶಾನ್ಯ ಸಾರಿಗೆ ನಿಗಮಗಳ ಎಲ್ಲ ನೌಕರರಿಗೆ ಇದು ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಸಾರಿಗೆ ನಿಗಮಗಳ ನೌಕರರು ಮಂಡಿಸಿದ್ದ ಒಂಬತ್ತು ಬೇಡಿಕೆಗಳ ಈ ಆದೇಶ ಜಾರಿ ಮಾಡುವ ಮೂಲಕ ಪೈಕಿ ಎಂಟು ಬೇಡಿಕೆಗಳನ್ನು ಈಡೇರಿಸಿದಂತಾಗಿದೆ. ನೌಕರರು ಬಹಳ ವರ್ಷಗಳಿಂದ ಒತ್ತಾಯಿಸುತ್ತಿದ್ದ ಅಂತರ ನಿಗಮ ವರ್ಗಾವಣೆಯ ಬೇಡಿಕೆಯನ್ನು ಸರ್ಕಾರ ಇತ್ತೀಚೆಗಷ್ಟೇ ಈಡೇರಿಸಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.