ಬೆಂಗಳೂರು: ‘ಬೆಳಗಾವಿ ರೈತರ ವಿರುದ್ಧ ಕೊಲ್ಕತ್ತಾದ ನ್ಯಾಯಾಲಯದಲ್ಲಿ ದಾಖಲಿಸಿರುವ ಪ್ರಕರಣಗಳನ್ನು ಕರ್ನಾಟಕಕ್ಕೆ ವರ್ಗಾಯಿಸಲು ವ್ಯವಸ್ಥೆ ಮಾಡಲಾಗುವುದು’ ಎಂದು ಆ್ಯಕ್ಸಿಸ್ ಬ್ಯಾಂಕ್ ವಕ್ತಾರರು ತಿಳಿಸಿದ್ದಾರೆ.
‘ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರಿ ಅಧಿಕಾರಿಗಳ ಜತೆ ಬುಧವಾರ ವಿವರವಾದ ಹಾಗೂ ರಚನಾತ್ಮಕ ಚರ್ಚೆ ನಡೆಸಿದ್ದೇವೆ. ರೈತರ ಹಿತಾಸಕ್ತಿ ಕಾಪಾಡುವುದು ನಮ್ಮ ಆದ್ಯತೆ. ಹೀಗಾಗಿ ಸಂಬಂಧಪಟ್ಟ ಎಲ್ಲ ಹಕ್ಕುದಾರರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಜತೆ ಬ್ಯಾಂಕ್ ನಿಕಟವಾಗಿ ಕಾರ್ಯನಿರ್ವಹಿಸಲಿದೆ’ ಎಂದು ವಕ್ತಾರರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.