ಬೆಂಗಳೂರು: ವಿವಿಧ ಕಾರಣಗಳಿಂದ ಸ್ಥಗಿತಗೊಳಿಸಲಾಗಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಕರ ವರ್ಗಾವಣೆಯನ್ನು ಅ. 8ರಿಂದ ಆರಂಭಿಸಲಾಗುವುದು ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.
ಕಾಯ್ದೆಯಲ್ಲಿನ ಗೊಂದಲ, ಶಿಕ್ಷಣ ಸಚಿವ ಎನ್. ಮಹೇಶ್ ಮಧ್ಯಪ್ರವೇಶ, ಕಡ್ಡಾಯ ವರ್ಗಾವಣೆಗೆ ಗುರಿಯಾಗುವ ಶಿಕ್ಷಕರ ಒತ್ತಡದ ಕಾರಣಗಳಿಂದ ವರ್ಗಾವಣೆ ಪ್ರಕ್ರಿಯೆ ನನೆಗುದಿಗೆ ಬಿದ್ದಿತ್ತು. ವರ್ಗಾವಣೆ ಪ್ರಕ್ರಿಯೆ ಆರಂಭಿಸುವಂತೆ ಗ್ರಾಮೀಣ ಪ್ರದೇಶದ ಶಿಕ್ಷಕರು ತೀವ್ರ ಬೇಡಿಕೆ ಮುಂದಿಟ್ಟಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.