ADVERTISEMENT

ಲಿಂಗತ್ವ ಅಲ್ಪಸಂಖ್ಯಾತರ ಕುಂದು ಕೊರತೆ ನಿವಾರಿಸಲು ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 23:37 IST
Last Updated 15 ಸೆಪ್ಟೆಂಬರ್ 2025, 23:37 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಬರುವ ಅಡೆತಡೆಗಳು ಹಾಗೂ ಕುಂದು ಕೊರತೆಗಳನ್ನು ನಿವಾರಿಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟ ತಿಳಿಸಿದೆ. 

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಪ್ರಕಾಶ್‌ ರಾಜ್, ‘ರಾಜ್ಯ ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರ  ಸಮೀಕ್ಷೆ ನಡೆಸುತ್ತಿ ರುವುದು ಸ್ವಾಗತಾರ್ಹ. ಸಮೀಕ್ಷೆಗೆ ಒಳಪಡುವವರ ಹಾಗೂ ಸಂಬಂಧಪಟ್ಟ ಇಲಾಖೆಗಳ ನಡುವೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಒಕ್ಕೂಟದಿಂದ ಸಮಿತಿ ರಚಿಸಲಾಗಿದೆ. ಇದರಲ್ಲಿ ನಾನು ಸೇರಿದಂತೆ ಮಾಳವಿಕಾ, ಅಬಿದಾ ಬೇಗಂ, ಮಾಯಾ ಎಸ್.ಆರ್. ನಾಯಕ್, ಪೃಥ್ವಿ ಇದ್ದಾರೆ. ಈ ಸಮೀಕ್ಷೆ ನಡೆಸಲು ಸಮುದಾಯದ ವ್ಯಕ್ತಿಗಳನ್ನು ನೇಮಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.