ಬೆಂಗಳೂರು: ಸಾರಿಗೆ ಇಲಾಖೆಯ ಸಕಾಲ ಸೇವೆಗಳಾದ ವಾಹನಗಳ ಮಾಲಿಕತ್ವ ವರ್ಗಾವಣೆ, ಸರಕು ಸಾಗಣೆ ರಹದಾರಿ ಮತ್ತು ವಾಹನ ಅರ್ಹತಾ ಪ್ರಮಾಣಪತ್ರಗಳ ಸೇವೆ ಪಡೆಯಲು ಇನ್ನು ಮುಂದೆ ಕಡ್ಡಾಯವಾಗಿ ಆನ್ಲೈನ್/ ಸೇವಾಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು.
ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವ್ಯಾಪಾರ ಸರಳೀಕರಣ ಮತ್ತು ವ್ಯವಹಾರ ಸ್ನೇಹಿ ವ್ಯವಸ್ಥೆಯನ್ನು ಜಾರಿಗೆ ತರುವ ಉದ್ದೇಶದಿಂದ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ ಅಧಿಸೂಚಿತ ಸಕಾಲ ಸೇವೆಗಳನ್ನು ಆನ್ಲೈನ್ ಮೂಲಕ ನಿರ್ವಹಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.