ADVERTISEMENT

ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬಂದವರಿಂದ ಕ್ವಾರಂಟೈನ್‌ಗೆ ಹೋಗಲು ನಕಾರ

​ಪ್ರಜಾವಾಣಿ ವಾರ್ತೆ
Published 4 ಜೂನ್ 2020, 7:40 IST
Last Updated 4 ಜೂನ್ 2020, 7:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮಹಾರಾಷ್ಟ್ರದಿಂದ ಬೆಂಗಳೂರಿಗೆ ರೈಲಿನಲ್ಲಿ ಗುರುವಾರ ಬೆಳಿಗ್ಗೆ 504 ಪ್ರಯಾಣಿಕರು ಬಂದಿಳಿದಿದ್ದಾರೆ. ಅವರಲ್ಲಿ ಕೆಲವರು ಕ್ವಾರಂಟೈನ್‌ಗೆ ಹೋಗಲು ವಿರೋಧ ವ್ಯಕ್ತಪಡಿಸಿದ್ದರಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

ಉದ್ಯಾನ್ ಎಕ್ಸ್‌ಪ್ರೆಸ್‌ನಲ್ಲಿ ಬಂದ ಪ್ರಯಾಣಿಕರನ್ನು ಕ್ವಾರಂಟೈನ್‌ಗೆ ಕಳುಹಿಸಲು ಬಿಬಿಎಂಪಿ ಮತ್ತು ಪೊಲೀಸ್‌ ಸಿಬ್ಬಂದಿ ಸಜ್ಜಾಗಿದ್ದರು. ಬಿಎಂಟಿಸಿ ಬಸ್‌ಗಳೂ ಸಿದ್ಧವಾಗಿದ್ದವು. ಬಸ್ ಹತ್ತಲು ಕೆಲವರು ವಿರೋಧ ವ್ಯಕ್ತಪಡಿಸಿ ಮನೆಯಲ್ಲೇ ಕ್ವಾರಂಟೈನ್‌ನಲ್ಲಿ ಇರುವುದಾಗಿ ಹೇಳಿದರು. ಆದರೆ, ಅದಕ್ಕೆ ಒಪ್ಪದ ಪೊಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಎಲ್ಲರು ಕ್ವಾರಂಟೈನ್‌ಗೆ ಹೋಗಲೇಬೇಕು ಎಂದು ಮನವರಿಕೆ ಮಾಡಿದರು. ಒಪ್ಪದೆ ಬ್ಯಾಗ್ ಹಿಡಿದು ಹೊರಟವರನ್ನು ಪೊಲೀಸರು ಬಲವಂತವಾಗಿ ಬಸ್ ಹತ್ತಿಸಿದರು.

‘ಬಸ್ ಹತ್ತುವ ಮುನ್ನ ಬಿಬಿಎಂಪಿ ಸಿಬ್ಬಂದಿ ₹200 ಪಡೆಯುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ನಾವು ತಿನ್ನಲು ಅನ್ನವಿಲ್ಲದ ಸ್ಥಿತಿಯಲ್ಲಿದ್ದೆವು. ಹಣ ಕೇಳಿದರೆ ಎಲ್ಲಿಂದ ತರಬೇಕು? ಬಸ್‌ನಲ್ಲಿ ಕ್ವಾರಂಟೈನ್‌ ಕೇಂದ್ರಕ್ಕೆ ಕರೆದೊಯ್ಯಲು ₹200 ಏಕೆ ಬೇಕು’ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.