ಬೆಂಗಳೂರು: ತಾರಾನಾಥ ಶಿಕ್ಷಣ ಸಂಸ್ಥೆಯ ಎಲ್.ವಿ.ಡಿ.ಮಹಾವಿದ್ಯಾಲಯದ ಬಿ.ಎಸ್ಸಿ ವಿದ್ಯಾರ್ಥಿನಿ ತ್ರಿವೇಣಿ ಅವರು 2022ನೇ ಸಾಲಿನ ಐಐಟಿ–ಜೆಎಎಂ ಪರೀಕ್ಷೆಯಲ್ಲಿ 1,179ನೇ ರ್ಯಾಂಕ್ ಗಳಿಸಿದ್ದಾರೆ.
‘ಗಣಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಹುಸೇನಪ್ಪ ಅವರ ಮಾರ್ಗದರ್ಶನದಲ್ಲಿ ವ್ಯಾಸಂಗ ಮಾಡಿದ್ದ ತ್ರಿವೇಣಿ, ಐಐಟಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ಕಾಲೇಜಿನ ಮೊದಲ ವಿದ್ಯಾರ್ಥಿಯಾಗಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.