ADVERTISEMENT

ಕ್ಷಯ ರೋಗ ಪತ್ತೆ ಆಂದೋಲನ

​ಪ್ರಜಾವಾಣಿ ವಾರ್ತೆ
Published 1 ಜನವರಿ 2019, 18:04 IST
Last Updated 1 ಜನವರಿ 2019, 18:04 IST

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇದೇ 2ರಿಂದ 12ರವರೆಗೆ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.

ಕೊಳೆಗೇರಿ, ಕೈದಿಗಳು, ವೃದ್ಧಾಪ್ಯ ಕೇಂದ್ರ, ಕಟ್ಟಡ ನಿರ್ಮಾಣ ಕಾರ್ಮಿಕರು, ನಿರಾಶ್ರಿತರ ಶಿಬಿರ, ರಾತ್ರಿ ಆಶ್ರಯ ತಾಣ, ಬೀದಿ ಮಕ್ಕಳು, ಅನಾಥಾಶ್ರಮ, ನಿರ್ಗತಿಕ ವಸತಿ, ರಕ್ಷಣಾ ವಲಯಗಳಲ್ಲಿ ತಪಾಸಣೆ ನಡೆಸಲಾಗುವುದು. ಗ್ರಾಮೀಣ ಪ್ರದೇಶ
ಮತ್ತು ಜನ ತಲುಪಲಾಗದ ಬುಡಕಟ್ಟು ಸ್ಥಳಗಳಿಗೂ ಆದ್ಯತೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2018–19ರ ಸಾಲಿನಲ್ಲಿ 99,900 ಜನರನ್ನು ತಪಾಸಣೆಗೆ ಒಳಪಡಿಸಲಾಗಿತ್ತು. 2,957 ಹೊಸ ಕ್ಷಯ ರೋಗಿಗಳನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.