ADVERTISEMENT

ಸೆಲ್ಫಿ: ಜಲಾಶಯಕ್ಕೆ ಬಿದ್ದು ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2019, 20:15 IST
Last Updated 22 ಏಪ್ರಿಲ್ 2019, 20:15 IST

ಬೀದರ್: ಭಾಲ್ಕಿ ತಾಲ್ಲೂಕಿನ ಬ್ಯಾಲಹಳ್ಳಿ ಬಳಿಯ ಕಾರಂಜಾ ಜಲಾಶಯದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕಲಬುರ್ಗಿ ಜಿಲ್ಲೆಯ ಮಹಾಗಾಂವ ಕ್ರಾಸ್‌ನ ನಾಗರಾಜ್ ಡಿಗ್ಗಿ (16) ಹಾಗೂ ಹುಮನಾಬಾದ್ ತಾಲ್ಲೂಕಿನ ದುಬಲಗುಂಡಿಯ ಕಾಶೀನಾಥ್ ಪಾಟೀಲ (17) ಮೃತಪಟ್ಟವರು.

ಬೇಸಿಗೆ ರಜೆ ಇದ್ದ ಕಾರಣ ಇವರು ಬ್ಯಾಲಹಳ್ಳಿಯಲ್ಲಿರುವ ಮಾವನ ಮನೆಗೆ ಬಂದಿದ್ದರು. ಭಾನುವಾರ ಸೂರ್ಯಾಸ್ತದ ಸಂದರ್ಭದಲ್ಲಿ ಕಾರಂಜಾ ಡ್ಯಾಂನ ಹತ್ತಿರ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.