ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ನಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಕಾರ್ಯಕರ್ತರಿಗೆ ಗೊಂದಲ ಮೂಡಿಸಿದ್ದಾರೆ.
ಕೆಲ ದಿನಗಳ ಹಿಂದೆ ಜೆಡಿಎಸ್ ವರಿಷ್ಠರು ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರು ತಮ್ಮ ಅಧಿಕೃತ ಅಭ್ಯರ್ಥಿ ಎಂದು ಘೋಷಿಸಿದ್ದರು. ಆದರೆ ಸೋಮವಾರ ಬಚ್ಚೇಗೌಡ ಅವರ ಜತೆಗೆ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರ ಸಂಬಂಧಿ, ಶಿಡ್ಲಘಟ್ಟ ತಾಲ್ಲೂಕಿನ ನಾಗಮಂಗಲದ ರಾಧಾಕೃಷ್ಣ ಅವರು ಕೂಡ ನಾಮಪತ್ರ ಸಲ್ಲಿಸಿದರು.
ಇಬ್ಬರು ಅಭ್ಯರ್ಥಿಗಳು ಒಂದೇ ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ಈ ಕುರಿತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ‘ನಮ್ಮ ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಅವಕಾಶ ಕೊಡಬೇಡಿ. ಬಚ್ಚೇಗೌಡ ಅವರ ನೇತೃತ್ವದಲ್ಲಿ ಈ ಚುನಾವಣೆ ನಡೆಯುತ್ತದೆ. ಆದರೆ ಇಬ್ಬರೂ ಈಗ ನಾಮಪತ್ರ ಸಲ್ಲಿಸುತ್ತಾರೆ. ಬಳಿಕ ಅಂತಿಮವಾಗಿ ಯಾರು ಸ್ಪರ್ಧಿಸಬೇಕು ಎಂದು ಕಾರ್ಯಕರ್ತರು, ಮುಖಂಡರ ಸಭೆ ನಡೆಸಿ ನಿರ್ಧರಿಸಲಾಗುತ್ತದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.