ADVERTISEMENT

ದುಬಾರೆ ಆನೆ ಕ್ಯಾಂಪ್‌ ಪ್ರವಾಸ: ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2020, 11:22 IST
Last Updated 4 ಮಾರ್ಚ್ 2020, 11:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕುಶಾಲನಗರ: ಪ್ರಸಿದ್ಧ ಪ್ರವಾಸಿ ತಾಣ ಕೊಡಗಿನ ದುಬಾರೆಯಲ್ಲಿರುವ ನದಿಯಲ್ಲಿ‌ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ನಡೆದಿದೆ.

ಗೋಣಿಕೊಪ್ಪ ಬಳಿಯ ಕಳತ್ಮಾಡುವಿನ ಲಯನ್ಸ್ ಶಾಲೆಯ ಶ್ರೇಯಸ್ (14), ನಳಿನ್ (14) ಮೃತ ವಿದ್ಯಾರ್ಥಿಗಳು.

ಸ್ಕೌಟ್ಸ್ & ಗೈಡ್ಸ್ ತಂಡದ 39 ವಿದ್ಯಾರ್ಥಿಗಳು ಪಿಕ್‌ನಿಕ್‌ಗೆಂದು ದುಬಾರೆಗೆ ಆಗಮಿಸಿದಾಗ ದುರ್ಘಟನೆ ನಡೆದಿದೆ. ನೀರಿಗೆ ಇಳಿದಾಗ ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿದ್ದಾರೆ.

ADVERTISEMENT

ಡಿಸೆಂಬರ್ ಒಳಗೇ ಪಠ್ಯೇತರ ಚಟುವಟಿಕೆ ಪೂರ್ಣಗೊಳಿಸಬೇಕು. ದುಬಾರೆಗೆ ತೆರಳಲು ಯಾವುದೇ ಅನುಮತಿ ಪಡೆದಿಲ್ಲ. ನಿರ್ಲಕ್ಷ್ಯ ವಹಿಸಿದ ಶಿಕ್ಷಕರು ‌ಹಾಗೂ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾದೋ ತಿಳಿಸಿದ್ದಾರೆ.

ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.