ಬೆಂಗಳೂರು: ಜೂನ್ 1ರ ಸಂಜೆ 5 ಗಂಟೆಯಿಂದ ಜೂನ್ 2ರ ಸಂಜೆ 5ರವರೆಗೆ ಒಟ್ಟು 388 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ರಾಜ್ಯದಲ್ಲಿ ಒಟ್ಟು 2339 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 52 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಒಂದೇ ದಿನ ಸೋಂಕು ದೃಢಪಟ್ಟವರ ಸಂಖ್ಯೆ ಮೂರಂಕಿ ಮುಟ್ಟಿದೆ. ಉಡುಪಿಯಲ್ಲಿ 150 ಮತ್ತು ಕಲಬುರ್ಗಿಯಲ್ಲಿ 100 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಬೆಳಗಾವಿಯಲ್ಲಿ 51, ರಾಯಚೂರಿನಲ್ಲಿ 16, ಬೆಂಗಳೂರು ನಗರದಲ್ಲಿ 12, ಬೀದರ್ನಲ್ಲಿ 10, ಬಾಗಲಕೋಟೆಯಲ್ಲಿ 9, ದಾವಣಗೆರೆಯಲ್ಲಿ 7, ಮಂಡ್ಯದಲ್ಲಿ 4 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.