ADVERTISEMENT

ಬಳ್ಳಾರಿ: ನಾಲ್ಕು ನಾಮಪತ್ರ ಸಲ್ಲಿಸಿದ‌ ಉಗ್ರಪ್ಪ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2018, 8:32 IST
Last Updated 16 ಅಕ್ಟೋಬರ್ 2018, 8:32 IST
   

ಬಳ್ಳಾರಿ: ಲೋಕಸಭಾ ಕ್ಷೇತ್ರದ ‌ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ‌ವಿ.ಎಸ್.ಉಗ್ರಪ್ಪ‌ ನಗರದಲ್ಲಿ‌ ಸೋಮವಾರ ನಾಲ್ಕು‌ ನಾಮಪತ್ರ ಸಲ್ಲಿಸಿದರು.

ಕೆಪಿಸಿಸಿ‌ ಕಾರ್ಯಾಧ್ಯಕ್ಷ ದಿನೇಶ್‌‌ ಗುಂಡೂರಾವ್, ಉಸ್ತುವಾರಿ ಸಚಿವ‌ ಡಿ.ಕೆ.ಶಿವಕುಮಾರ್, ರಾಜ್ಯ ಸಭೆ‌ ಸದಸ್ಯ ನಾಸಿರ್ ಹುಸೇನ್, ಶಾಸಕರಾದ ಜೆ.ಎನ್.ಗಣೇಶ, ಬಿ.ನಾಗೇಂದ್ರ, ಅಲ್ಲಂ‌ ವೀರಭದ್ರಪ್ಪ ಟಿಕೆಟ್ ಆಕಾಂಕ್ಷಿಯಾಗಿದ್ದ‌ ಬಿ.ವೆಂಕಟೇಶ ‌ಪ್ರಸಾದ್ ಇದ್ದರು.

ಇದನ್ನೂ ಓದಿ:ಐದರ ಆಟ; ಭಿನ್ನಮತ ಸ್ಫೋಟ

ADVERTISEMENT

ಕಾಂಗ್ರೆಸ್‌ ಅಭ್ಯರ್ಥಿಆನಂದ ನ್ಯಾಮಗೌಡ ನಾಮಪತ್ರ

ಜಮಖಂಡಿ:ಕಾಂಗ್ರೆಸ್ ಅಭ್ಯರ್ಥಿಯಾಗಿ ಆನಂದ ನ್ಯಾಮಗೌಡ ನಾಮಪತ್ರ ಸಲ್ಲಿಸಿದರು.

‌ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಜೆಡಿಎಸ್ ಮುಖಂಡರಾದ ಎಸ್.ಕೆ.ಬೆಳ್ಳುಬ್ಬಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.