ಚಿಂಚೋಳಿ (ಕಲಬುರ್ಗಿ ಜಿಲ್ಲೆ): ‘ನಿಮಗೆ ಯಾವುದೇ ತೊಂದರೆ ಆಗದಂತೆ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ. ನೀವು ಬನ್ನಿ’ ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಕರೆ ನಂಬಿ ಶಾಸಕ ಉಮೇಶ ಜಾಧವ ಮುಂಬೈನಿಂದ ಹೈದರಾಬಾದ್ವರೆಗೆ ಬಂದು ಮತ್ತೆ ಮುಂಬೈಗೆ ವಾಪಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಮೇಶ ಜಾಧವ ಬುಧವಾರಬೆಳಿಗ್ಗೆ ತಮ್ಮನ್ನು ಸಂಪರ್ಕಿಸಿದ್ದ ಖಂಡ್ರೆ ಅವರೊಂದಿಗೆ ಅಳಲು ತೋಡಿಕೊಂಡಿದ್ದರು. ಖಂಡ್ರೆ ಅವರ ಮನವಿ ಮೇರೆಗೆಮುಂಬೈನಿಂದ ಸಂಜೆ 4 ಗಂಟೆಗೆ ಹೈದರಾಬಾದ್ಗೆ ಬಂದಿದ್ದರು ಎಂದು ಗೊತ್ತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.