ADVERTISEMENT

ರಾಜೀನಾಮೆ ಅಂಗೀಕಾರ ವಿಳಂಬ: ಜಾಧವಗೆ ‘ವರ’!

ಜಾಧವಗೆ ಜೀವದಾನ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2019, 19:35 IST
Last Updated 10 ಮಾರ್ಚ್ 2019, 19:35 IST
ಡಾ.ಉಮೇಶ ಜಾಧವ
ಡಾ.ಉಮೇಶ ಜಾಧವ   

ಕಲಬುರ್ಗಿ: ಚಿಂಚೋಳಿಯ ಡಾ.ಉಮೇಶ ಜಾಧವ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರ ಆಗದಿರುವುದು ಅವರಿಗೆ ‘ವರ’ವಾಗಿ ಪರಿಣಮಿಸಿದೆ!

ಜಾಧವ ಅವರು ಮಾ.4ರಂದು ರಾಜೀನಾಮೆ ಸಲ್ಲಿಸಿದ್ದರು. ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶಕುಮಾರ್ ಅವರು ರಾಜೀನಾಮೆ ಅಂಗೀಕರಿಸಿ, ಈ ಕ್ಷೇತ್ರದ ಶಾಸಕ ಸ್ಥಾನ ಖಾಲಿ ಇದೆ ಎಂಬ ಮಾಹಿತಿಯನ್ನುಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರೆ ಲೋಕಸಭೆ ಚುನಾವಣೆಯೊಂದಿಗೆ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯೂ ಘೋಷಣೆಯಾಗುವ ಸಾಧ್ಯತೆ ಇತ್ತು.

‘ಜಾಧವ ಲೋಕಸಭೆಗೆ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಅಲ್ಲಿ ಹೆಚ್ಚುಕಡಿಮೆಯಾದರೆ, ಮತ್ತೆ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದ್ದಾರೆ. ಎರಡೂ ಚುನಾವಣೆ ಏಕಕಾಲಕ್ಕೆ ನಡೆದಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ರಾಜೀನಾಮೆ ಅಂಗೀಕಾರ ವಿಳಂಬವಾಗಿರುವುದು ಅವರಿಗೆ ಈ ಬಗೆಯ ‘ಸುರಕ್ಷತೆ’ ಕಲ್ಪಿಸಿಕೊಟ್ಟಂತಾಗಿದೆ’ ಎಂಬುದು ಮೂಲಗಳ ಮಾಹಿತಿ.

ADVERTISEMENT

ಚಿಂಚೋಳಿ ವರದಿ: ‘ನನ್ನ ರಾಜೀನಾಮೆ ಅಂಗೀಕಾರವಾಗಿದ್ದರೆ ಎರಡೂ ಚುನಾವಣೆ ಒಮ್ಮೆಲೆ ನಡೆಯುತ್ತಿದ್ದವು. ಇದಕ್ಕೆ ನಾನೂ ಹೆದರಿರಲಿಲ್ಲ. ಬಿಜೆಪಿಯೂಸಿದ್ಧವಾಗಿತ್ತು’ ಎಂದು ಡಾ.ಉಮೇಶ ಜಾಧವ ಅವರು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.