ADVERTISEMENT

ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಆಗಸ್ಟ್ 2022, 7:19 IST
Last Updated 2 ಆಗಸ್ಟ್ 2022, 7:19 IST
ಅಮಿತ್ ಶಾ (ಸಂಗ್ರಹ ಚಿತ್ರ)
ಅಮಿತ್ ಶಾ (ಸಂಗ್ರಹ ಚಿತ್ರ)   

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಗುರವಾರ ನಡೆಯಲಿರುವ ‘ಸಂಕಲ್ಪದಿಂದ ಸಿದ್ಧಿ (ಸಂಕಲ್ಪ್ ಸೇ ಸಿದ್ಧಿ)’ ಸಮಾವೇಶದ ಮೂರನೇ ಆವೃತ್ತಿಯಲ್ಲಿ ಭಾಗಿಯಾಗಲಿರುವ ಅವರು ಬಳಿಕ ದೆಹಲಿಗೆ ವಾಪಸಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಬುಧವಾರ ರಾತ್ರಿ 8 ಗಂಟೆಗೆ ದೆಹಲಿಯಿಂದ ಹೊರಡಲಿರುವ ಸಚಿವರು ಸುಮಾರು 11 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. ಬಳಿಕ ರೇಸ್‌ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ತಂಗಲಿದ್ದಾರೆ.

ಗುರುವಾರ ಬೆಳಿಗ್ಗೆ 11 ಗಂಟೆಗೆ ‘ಸಂಕಲ್ಪ್ ಸೇ ಸಿದ್ಧಿ’ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ ನಂತರ ದೆಹಲಿಗೆ ವಾಪಸಾಗಲಿದ್ದಾರೆ ಎಂದು ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.