ಬೆಂಗಳೂರು / ಚಿತ್ರದುರ್ಗ: ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಕುಸಿದು ಬಿದ್ದ ಕೇಂದ್ರ ಸಚಿವ ಡಿ.ವಿ. ಸದಾನಂದ
ಗೌಡ ಅವರನ್ನು ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.
ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಬೆಂಗಳೂರಿಗೆ ಮರಳುತ್ತಿದ್ದಾಗ ಚಿತ್ರದುರ್ಗದಲ್ಲಿ ಸಚಿವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಭಾನುವಾರ ಸಂಜೆ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಅವರ ಆರೋಗ್ಯದ ಮೇಲೆ ಮುಂದಿನ 24 ಗಂಟೆ ನಿಗಾ ಇರಿಸಲಾಗುವುದು.
ಚಿತ್ರದುರ್ಗದಲ್ಲಿರುವ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿಸಚಿವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ನಲ್ಲಿ ಜೀರೊ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಕರೆ ತರಲಾಯಿತು.
ಕುಸಿದುಬಿದ್ದ ಸಚಿವರು: ಚಿತ್ರದುರ್ಗದ ಹೋಟೆಲ್ ನವೀನ್ ರೀಜೆನ್ಸಿಗೆ ಮಧ್ಯಾಹ್ನ 1.45ಕ್ಕೆ ಊಟಕ್ಕೆ ತೆರಳಿದ್ದರು. ಕಾರಿನಿಂದ ಕೆಳಗಿಳಿದ ಸಚಿವರನ್ನು ಸ್ಥಳೀಯ ಬಿಜೆಪಿ ನಾಯಕರು ಸ್ವಾಗತಿಸಿದ್ದರು. ಹೂವಿನಹಾರ ಹಾಕಿಸಿಕೊಂಡು ಮುಂದಡಿ ಇಟ್ಟ ಕ್ಷಣಾರ್ಧದಲ್ಲಿ ಸಚಿವರು ಕುಸಿದುಬಿದ್ದರು ಎಂದು ಸ್ಥಳದಲ್ಲಿದ್ದ ಬಿಜೆಪಿ ಮುಖಂಡರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.