ADVERTISEMENT

ಅಮೃತಾನಂದಮಯಿ, ಕರಿವೃಷಭಾ ಸ್ವಾಮೀಜಿಗೆ ಗೌರವ ಡಾಕ್ಟರೇಟ್

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2019, 20:07 IST
Last Updated 15 ಮಾರ್ಚ್ 2019, 20:07 IST
ಕರಿವೃಷಭಾ ದೇಶಿಕೇಂದ್ರ ಸ್ವಾಮೀಜಿ, ಮಾತಾ ಅಮೃತಾನಂದಮಯಿ ದೇವಿ
ಕರಿವೃಷಭಾ ದೇಶಿಕೇಂದ್ರ ಸ್ವಾಮೀಜಿ, ಮಾತಾ ಅಮೃತಾನಂದಮಯಿ ದೇವಿ   

ಮೈಸೂರು: ಮೈಸೂರು ವಿಶ್ವವಿದ್ಯಾಲಯವು ಕೇರಳದ ಮಾತಾ ಅಮೃತಾನಂದಮಯಿ ದೇವಿ, ತಿಪಟೂರು ತಾಲ್ಲೂಕು ನೊಣವಿನಕೆರೆ ಸೋಮನಕಟ್ಟೆ ಕಾಡಸಿದ್ದೇಶ್ವರ ಮಠದ ಕರಿವೃಷಭಾ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ಆಯ್ಕೆ ಮಾಡಿದೆ.

ಧಾರ್ಮಿಕ ಕ್ಷೇತ್ರದಲ್ಲಿನ ಸಾಧನೆ ಗುರುತಿಸಿ ಗೌರವ ಡಾಕ್ಟರೇಟ್‌ಗೆ ಪರಿಗಣಿಸಲಾಗಿದೆ.

ವಿವಿಧ ಕ್ಷೇತ್ರಗಳ 14 ಪ್ರಮುಖರ ಹೆಸರುಗಳನ್ನು ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ಮಾರ್ಚ್‌ 17ರಂದು ನಡೆಯುವ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ ಶುಕ್ರವಾರ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.