ADVERTISEMENT

ದೇಶಕ್ಕೆ ಬಲ ತುಂಬುವ ಅಭೂತಪೂರ್ವ ಪ್ಯಾಕೇಜ್‌: ಬಿಎಸ್‌ವೈ

​ಪ್ರಜಾವಾಣಿ ವಾರ್ತೆ
Published 12 ಮೇ 2020, 19:38 IST
Last Updated 12 ಮೇ 2020, 19:38 IST
ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ    

ಬೆಂಗಳೂರು: ಕೋವಿಡ್‌ –19 ಬಿಕ್ಕಟ್ಟು ಎದುರಿಸಲು, ಆರ್ಥಿಕತೆಗೆ ಶಕ್ತಿ ತುಂಬಲು ಮತ್ತು ಸಂಕಷ್ಟ ಎದುರಿಸುತ್ತಿರುವ ಎಲ್ಲ ವರ್ಗಗಳ ಜನತೆಗೆ ನೆರವಾಗಲು ಪ್ರಧಾನಿ ನರೇಂದ್ರ ಮೋದಿ ₹20 ಲಕ್ಷ ಕೋಟಿ ಪ್ಯಾಕೇಜ್‌ ಪ್ರಕಟಿಸಿರುವುದನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ವಾಗತಿಸಿದ್ದಾರೆ.

‘ನಮ್ಮ ಜಿಡಿಪಿಯ ಶೇ 10 ರಷ್ಟು ಪ್ಯಾಕೇಜ್‌ ಪ್ರಕಟಿಸಿರುವುದು ಅಭೂತಪೂರ್ವವಾದುದು. ಸವಾಲನ್ನು ಅವಕಾಶವನ್ನಾಗಿ ಪರಿವರ್ತಿಸಿ, ಸ್ವಾವಲಂಬಿ ಭಾರತ ನಿರ್ಮಾಣದ ನಿಟ್ಟಿನಲ್ಲಿ ವಸುದೈವ ಕುಟುಂಬಕಂ ಪರಿಕಲ್ಪನೆಯ ಸದೃಢ ಸಾಮಾಜಿಕ ವ್ಯವಸ್ಥೆ ಸಾಕಾರಗೊಳಿಸಲು ಮೋದಿಯವರ ಕ್ರಮದಿಂದ ಸಮಸ್ತ ಭಾರತೀಯರ ಆತ್ಮ ವಿಶ್ವಾಸ ಹೆಚ್ಚಿಸಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT