ADVERTISEMENT

ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡಿದ ನಟ ಉಪೇಂದ್ರ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2019, 8:21 IST
Last Updated 22 ಆಗಸ್ಟ್ 2019, 8:21 IST
   

ಬೆಂಗಳೂರು: ನಟ, ನಿರ್ದೇಶಕ ಉಪೇಂದ್ರ ಅವರು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡಿದ್ದಾರೆ.

ಗುರುವಾರ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ಭೇಟಿಯಾದ ನಟ ಉಪೇಂದ್ರ ಅವರು, ದೇಣಿಗೆಯಚೆಕ್ ಅನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದರು. ಚೆಕ್‌ ಅನ್ನು ಮುಖ್ಯಮಂತ್ರಿ ಸ್ವೀಕರಿಸಿದರು.

ಇದಕ್ಕೂ ಹಿಂದೆ ಆಗಸ್ಟ್‌ 8ರಂದು ಟ್ವೀಟ್‌ ಮಾಡಿದ್ದ ನಟ ಉಪೇಂದ್ರ, ತಾವು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ₹5 ಲಕ್ಷ ದೇಣಿಗೆ ನೀಡುತ್ತಿರುವುದಾಗಿ ಘೋಷಿಸಿದ್ದರು. ಅಲ್ಲದೆ, ಸಾರ್ವಜನಿಕರೂ ಇಚ್ಚಾ‌ನುಸಾರ ನೆರವು ನೀಡಬೇಕಾಗಿ ಕೋರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.