ADVERTISEMENT

ಭದ್ರಾ ಮೇಲ್ದಂಡೆಗೆ ರಾಷ್ಟ್ರೀಯ ಮಾನ್ಯತೆ: ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2022, 19:50 IST
Last Updated 16 ಫೆಬ್ರುವರಿ 2022, 19:50 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಸಿರಿಗೆರೆ (ಚಿತ್ರದುರ್ಗ): ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆ ನೀಡಲು ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಲ್ಲಿನ ತರಳಬಾಳು ಮಠದ ಆವರಣದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆಯ ಅಂತಿಮ ದಿನದಂದು ನಡೆದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರ ಸದ್ಧರ್ಮ ಸಿಂಹಾಸನಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ಉನ್ನತ ಸಮಿತಿ ಭದ್ರಾ ಮೇಲ್ದಂಡೆಗೆ ಸಮ್ಮತಿ ನೀಡಿದೆ. ಇದು ರಾಜ್ಯದ ಮೊದಲ ರಾಷ್ಟ್ರೀಯ ಜಲಯೋಜನೆಯಾಗಿದೆ. ಇದರಿಂದ ₹ 12,500 ಕೋಟಿ ನೆರವು ಕರ್ನಾಟಕಕ್ಕೆ ಸಿಗಲಿದೆ. ಯೋಜನೆ ಅನುಷ್ಠಾನ ಇನ್ನಷ್ಟು ಚುರುಕು ಪಡೆಯಲಿದೆ’ ಎಂದು ಹೇಳಿದರು.

ADVERTISEMENT

‘ಭದ್ರಾ ಮೇಲ್ದಂಡೆ ಯೋಜನೆಯನ್ನು ಬಿ.ಎಸ್‌.ಯಡಿಯೂರಪ್ಪ ಅವರು ರೂಪಿಸಿದ್ದರು. ಇದಕ್ಕೆ ಸಾಕಷ್ಟು ವಿರೋಧವಿತ್ತು. ಇದರ ನಡುವೆಯೂ ದಿಟ್ಟ ತೀರ್ಮಾನ ಕೈಗೊಂಡಿದ್ದರ ಪರಿಣಾಮವಾಗಿ ಯೋಜನೆ ರಾಷ್ಟ್ರೀಯ ಮಾನ್ಯತೆ ದೊರೆಯಲು ಸಾಧ್ಯವಾಗಿದೆ. ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಬೇಕು ಎಂಬ ಕನಸು ನನಸಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.