ADVERTISEMENT

‘ಕನ್ನಡದಲ್ಲಿ ಯುಪಿಎಸ್‌ಸಿ’ ಟ್ವಿಟರ್ ಅಭಿಯಾನ ನಾಳೆ‌

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2021, 8:32 IST
Last Updated 9 ಅಕ್ಟೋಬರ್ 2021, 8:32 IST

ಬೆಂಗಳೂರು: ‘ಯುಪಿಎಸ್‌ಸಿ ಪರೀಕ್ಷೆಗಳನ್ನು ಈ ಬಾರಿಯೂ ಕನ್ನಡದಲ್ಲಿ ಬರೆಯಲು ಅವಕಾಶ ನೀಡದ ಕೇಂದ್ರ ಸರ್ಕಾರದ ವಿರುದ್ಧ ಅ.10ರಂದು ಬೆಳಿಗ್ಗೆ 10.10ರಿಂದ ‘ಕನ್ನಡದಲ್ಲಿ ಯುಪಿಎಸ್‌ಸಿ’ ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ರಕ್ಷಣಾ‌ ವೇದಿಕೆ ಅಧ್ಯಕ್ಷಟಿ.ಎ.ನಾರಾಯಣಗೌಡ ತಿಳಿಸಿದರು.

‘ಅ.10ರಂದುಯುಪಿಎಸ್‌ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯಲ್ಲಿ ಕನ್ನಡಕ್ಕೆ ಮಾನ್ಯತೆ ನೀಡದೆ,ಕನ್ನಡಿಗರನ್ನು ಎರಡನೇ ದರ್ಜೆಯ ಪ್ರಜೆಗಳಂತೆ ನೋಡಲಾಗುತ್ತಿದೆ. ಇದನ್ನು ಖಂಡಿಸಿಕನ್ನಡಿಗರ ಹಕ್ಕೊತ್ತಾಯದ ಸರಣಿ ಅಭಿಯಾನ ಆರಂಭಿಸಿದ್ದೇವೆ. ಈ ಮೂಲಕ‌ ಕರ್ನಾಟಕದ ಜನಪ್ರತಿನಿಧಿಗಳ ಮೇಲೆ ಒತ್ತಡ ಹೇರಲಿದ್ದೇವೆ’ ಎಂದರು.

‘ಅಭಿಯಾನದ ಭಾಗವಾಗಿ ಅ.10ರಂದು #ಕನ್ನಡದಲ್ಲಿUPSC, #UPSCInKannada ಎಂಬ ಹ್ಯಾಶ್ ಟ್ಯಾಗ್‌ ಬಳಸುವ ಮೂಲಕ ಟ್ವಿಟರ್‌ನಲ್ಲಿ ದನಿ ಎತ್ತಲಿದ್ದೇವೆ. ಅಭಿಯಾನದಲ್ಲಿ ರಾಜ್ಯದ ಜನ ಭಾಗವಹಿಸಬಹುದು. ಕೇಂದ್ರ ಸರ್ಕಾರದ ಎಲ್ಲ ಹಂತದ ಪರೀಕ್ಷೆಗಳೂ ಕನ್ನಡದಲ್ಲಿ ಬರೆಯಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ವಿಚಾರ ಸಂಕಿರಣ, ಚಿತ್ರ ಚಳವಳಿ, ಪತ್ರ ಚಳವಳಿಗಳನ್ನೂ ಹಮ್ಮಿಕೊಳ್ಳಲಿದ್ದೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.