ADVERTISEMENT

Video | ಸರ್ಕಾರಿ ಸ್ಕೂಲ್‌ನಲ್ಲಿ ಓದಿದ್ದ PSI ಶಾಂತಪ್ಪ ಕುರುಬರ ಈಗ UPSC ಟಾಪರ್‌!

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಏಪ್ರಿಲ್ 2024, 16:03 IST
Last Updated 16 ಏಪ್ರಿಲ್ 2024, 16:03 IST

ಪ್ರಜಾವಾಣಿಯ ‘ಯುವ ಸಾಧಕ’ (ಡಿಎಚ್‌ ಚೇಂಜ್‌ಮೇಕರ್‌) ಪ್ರಶಸ್ತಿಗೆ ಪಾತ್ರರಾಗಿದ್ದ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಹೊಸ ಗೆಣಿಕೆಹಾಳು ಗ್ರಾಮದ ಯುವಕ ಶಾಂತಪ್ಪ ಕುರುಬರ ಅವರು 2023ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗದ (ಯುಸಿಎಸ್‍ಸಿ) ಪರೀಕ್ಷೆಯಲ್ಲಿ ದೇಶಕ್ಕೆ 644ನೇ ರ್‍ಯಾಂಕ್‌ ಪಡೆದಿದ್ದಾರೆ. ಶಾಂತಪ್ಪ ಅವರು 2016ರಲ್ಲಿ ಪಿಎಸ್‍ಐ ಹುದ್ದೆಗೆ ಆಯ್ಕೆಯಾಗಿದ್ದರು. ತಮ್ಮ 8ನೇ ಪ್ರಯತ್ನದಲ್ಲಿ ಯುಪಿಎಸ್‌ಸಿಯ ನಾಗರಿಕ ಸೇವಾ ಪರೀಕ್ಷೆಯಲ್ಲಿಯೂ ಯಶಸ್ವಿಯಾಗಿರುವ ಶಾಂತಪ್ಪ , ಅವರು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆದಿದ್ದು ಕುರುಗೋಡಿನ ಗೆಣಿಕೆಹಾಳು ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.