ಶಿರಸಿ: ಕನ್ನಡ ಸಾಹಿತ್ಯವನ್ನು ಐಚ್ಛಿಕ ವಿಷಯವಾಗಿ ಆಯ್ದುಕೊಂಡಿದ್ದ ಯಲ್ಲಾಪುರದ ವೆಂಕಟರಮಣ ಕವಡಿಕೇರಿ ಅವರು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ 363ನೇ ರ್ಯಾಂಕ್ ಗಳಿಸಿದ್ದಾರೆ.
ಕೃಷಿಕರಾಗಿರುವ ಸುಮತಿ ಮತ್ತು ನಾಗೇಶ ಕವಡಿಕೇರಿ ಅವರ ಪುತ್ರ ವೆಂಕಟರಮಣ ಅವರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಧಿಕಾರಿಯಾಗಿದ್ದಾರೆ.
‘ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಸಂಘದ ಸಂಚಾಲಕನಾಗಿದ್ದಾಗ ಅತಿಥಿಗಳಾಗಿ ಬರುತ್ತಿದ್ದ ಹಿರಿಯ ಅಧಿಕಾರಿಗಳ ಮಾತಿನಿಂದ ಸ್ಫೂರ್ತಿಗೊಂಡು ಯುಪಿಎಸ್ಸಿ ಪರೀಕ್ಷೆ ಬರೆಯಲು ನಿರ್ಧರಿಸಿದೆ. ನಾಲ್ಕು ಬಾರಿ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದಿದ್ದೆ. ಈ ಬಾರಿ ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷೆ ಎದುರಿಸಿದ್ದೆ. ಯಾವುದೇ ಕೋಚಿಂಗ್ ಇಲ್ಲದೇ, ಕೆಲವು ಸ್ನೇಹಿತರು ಸೇರಿ ಗುಂಪು ಅಧ್ಯಯನ ಮಾಡುತ್ತಿದ್ದೆವು’ ಎಂದು ಅವರು ಪ್ರತಿಕ್ರಿಯಿಸಿದರು.
‘ನಾನು ಎರಡನೇ ತರಗತಿಯಲ್ಲಿರುವಾಗಿನಿಂದ ‘ಪ್ರಜಾವಾಣಿ’ ಓದುಗ. ಪರೀಕ್ಷೆ ಸಿದ್ಧತೆಗೆ ಕೂಡ ಈ ಪತ್ರಿಕೆಯನ್ನು ತಪ್ಪದೇ ಓದುತ್ತಿದ್ದೆ’ ಎಂದು ಹೆಮ್ಮೆಯಿಂದ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.