ಬೆಂಗಳೂರು: ಕ್ಯಾಂಟೀನ್ಗಳಿಗೆ ರಾಜಕೀಯ ವ್ಯಕ್ತಿಗಳ ಹೆಸರೇಕೆ? ಅದಕ್ಕೆ ಯಾರ ಹೆಸರು ಇಡಬೇಕು ಅಥವಾ ಬಿಡಬೇಕು ಎಂಬುದರ ಚರ್ಚೆ ಆಗಲಿ. ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅನ್ನಪೂರ್ಣೇಶ್ವರಿ ಹೆಸರು ಇಟ್ಟರೆ ಬೇರೆ ಪಕ್ಷದವರು ವಿರೋಧ ಏಕೆ ಮಾಡಬೇಕು. ಸರ್ಕಾರಕ್ಕೆ ಹೆಸರು ಬದಲಿಸಬೇಕು ಎಂಬ ಉದ್ದೇಶವಿಲ್ಲ. ಜನರ ಅಭಿಪ್ರಾಯ ಬದಲಿಸಬೇಕು ಎಂದು ಇದೆ’ ಎಂದರು.
‘ಹಿಂದೆ ವಾಜಪೇಯಿ ಅವರ ಅವಧಿ ಸುವರ್ಣ ಚತುಷ್ಪಥ ರಸ್ತೆಗೆ ವಾಜಪೇಯಿ ಹೆಸರು ಇಡಲಾಗಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ರಸ್ತೆಗಳಲ್ಲಿದ್ದ ಬೋರ್ಡ್ಗಳನ್ನೇ ಕಿತ್ತು ಹಾಕಿತು. ಇದು ಎಂಥಾ ಸಂಸ್ಕೃತಿ. ಆದ್ದರಿಂದ ಕಾಂಗ್ರೆಸ್ನವರಿಂದ ಸಂಸ್ಕೃತಿ ಕಲಿಯಬೇಕಿಲ್ಲ’ ಎಂದು ಸುನಿಲ್ ಹೇಳಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.