ಬೆಂಗಳೂರು: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಡಿಸೆಂಬರ್ 29ರಂದು ರಾಜ್ಯಕ್ಕೆ ಬರಲಿದ್ದು, ಮೂರು ದಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಡಿ. 29ರ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸುವ ಉಪ ರಾಷ್ಟ್ರಪತಿ ಹೊಸಕೋಟೆಯ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಸಂಶೋಧನೆ ಹಾಗೂ ಶಿಕ್ಷಣ ಕೇಂದ್ರಕ್ಕೆ ಭೇಟಿ ನೀಡುವರು. ಮಧ್ಯಾಹ್ನ ರಾಜಭವನಕ್ಕೆ ವಾಪಸಾಗುವರು. ಡಿ. 31ರವರೆಗೂ ನಗರದಲ್ಲಿ ವಾಸ್ತವ್ಯ ಹೂಡುವರು. ಡಿ. 31ರ ಬೆಳಿಗ್ಗೆ ಚೆನ್ನೈಗೆ ಪ್ರಯಾಣ ಬೆಳೆಸುವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.