ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ಜೂನ್ 3ರಂದು ನಿಗದಿಯಾಗಿರುವ ಚುನಾವಣೆಗೆ ಸಲ್ಲಿಕೆಯಾಗಿರುವ ಎಲ್ಲ ಏಳೂ ನಾಮಪತ್ರಗಳು ಕ್ರಮಬದ್ಧವಾಗಿವೆ ಮತ್ತು ಅಂಗೀಕಾರಗೊಂಡಿವೆ. ಹೀಗಾಗಿ, ಮೂರು ಪಕ್ಷಗಳ (ಬಿಜೆಪಿಯ ನಾಲ್ವರು, ಕಾಂಗ್ರೆಸ್ಸಿನ ಇಬ್ಬರು, ಜೆಡಿಎಸ್ನ ಒಬ್ಬ) ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವುದು ನಿಚ್ಚಳವಾಗಿದೆ.
ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ. ಕೆ.ವಿಶಾಲಾಕ್ಷಿ ಅವರು, ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.