ADVERTISEMENT

ಎಚ್‌ಡಿಕೆ ಪ್ರತಿಕ್ರಿಯೆಗೆ ಕಾಯುತ್ತಿರುವೆ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 19:45 IST
Last Updated 27 ನವೆಂಬರ್ 2021, 19:45 IST
ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ   

ಶಿವಮೊಗ್ಗ: ‘ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಜತೆ ಹೊಂದಾಣಿಕೆ ಪ್ರಸ್ತಾಪ ಮಾಡಿದ್ದೇನೆ. ಎಚ್‌.ಡಿ.ಕುಮಾರಸ್ವಾಮಿ ಅವರ ಪ್ರತಿಕ್ರಿಯೆಗೆ ಕಾಯುತ್ತಿರುವೆ’ ಎಂದು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಳೆಯೊಳಗೆ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಬಹುದು. ಕಾಯುತ್ತೇನೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲಲಿದೆ. 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, 15 ಕಡೆ ಖಚಿತ.ಈ ಚುನಾವಣೆಯ ಫಲಿತಾಂಶವು ಮುಂದೆ ವಿಧಾನಸಭೆ, ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT