ಬೆಂಗಳೂರು: ಯಲಹಂಕ ಬಳಿಯ ರಮಡ ರೆಸಾರ್ಟ್ನಿಂದ ಎರಡು ಬಸ್ಸುಗಳಲ್ಲಿ ಬಿಜೆಪಿ ಶಾಸಕರು ವಿಧಾನಸೌಧಕ್ಕೆ ಆಗಮಿಸಿದರು.
ವಿರೋಧ ಪಕ್ಷದ ನಾಯಕರಾದ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್ ಈಶ್ವರಪ್ಪ, ವಿ.ಸೋಮಣ್ಣ ಸೇರಿದಂತೆ ರೆಸಾರ್ಟ್ನಲ್ಲಿ ತಂಗಿದ್ದ ಎಲ್ಲಾ ಶಾಸಕರು ವಿಧಾನಸೌಧಕ್ಕೆ ಆಗಮಿಸಿದರು.
ಶಾಸಕ ಆರ್.ಅಶೋಕ್ ಹಾಗೂ ಆಶ್ವತ್ಥ್ ನಾರಾಯಣ ಅವರು ಇಬ್ಬರು ಪಕ್ಷೇತರ ಶಾಸಕರನ್ನು ಸದನಕ್ಕೆ ಕರೆತರುವ ಸಾಧ್ಯತೆಗಳಿವೆ.
ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಆರಂಭವಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.