ADVERTISEMENT

ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಇಂಚಿಂಚಾಗಿ ಕಡಿಯುತ್ತೇವೆ: ಎಬಿವಿಪಿ ನಾಯಕಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2022, 12:19 IST
Last Updated 23 ಫೆಬ್ರುವರಿ 2022, 12:19 IST
ವಿಜಯಪುರ ನಗರದಲ್ಲಿ ಬಜರಂಗದಳ, ವಿಶ್ವಹಿಂದೂ ಪರಿಷತ್‌ ಹಾಗೂ ಭಾವಸಾರ ಕ್ಷತ್ರೀಯ ಸಂಘಟನೆಯಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ  ಎಬಿವಿಪಿ ನಗರ ಪ್ರಮುಖರಾದ ಪೂಜಾರ ವೀರಶೆಟ್ಟಿ ಮಾತನಾಡಿದರು –ಪ್ರಜಾವಾಣಿ ಚಿತ್ರ
ವಿಜಯಪುರ ನಗರದಲ್ಲಿ ಬಜರಂಗದಳ, ವಿಶ್ವಹಿಂದೂ ಪರಿಷತ್‌ ಹಾಗೂ ಭಾವಸಾರ ಕ್ಷತ್ರೀಯ ಸಂಘಟನೆಯಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ  ಎಬಿವಿಪಿ ನಗರ ಪ್ರಮುಖರಾದ ಪೂಜಾರ ವೀರಶೆಟ್ಟಿ ಮಾತನಾಡಿದರು –ಪ್ರಜಾವಾಣಿ ಚಿತ್ರ   

ವಿಜಯಪುರ: ‘ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಛತ್ರಪತಿ ಶಿವಾಜಿ ಕೈಯಲ್ಲಿರುವ ಖಡ್ಗದಿಂದ ಇಂಚಿಂಚಾಗಿ ಕಡಿಯುತ್ತೇವೆ‘ ಎಂದು ಎಬಿವಿಪಿ ನಗರ ಪ್ರಮುಖರಾದ ಪೂಜಾವೀರಶೆಟ್ಟಿ ಎಚ್ಚರಿಕೆ ನೀಡಿದರು.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷಾ ಕೊಲೆ ಖಂಡಿಸಿ ನಗರದಲ್ಲಿ ಬುಧವಾರ ವಿಶ್ವಹಿಂದೂ ಪರಿಷತ್‌, ಬಜರಂಗದಳ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

’ಹರ್ಷಾಕೊಲೆ ಆರೋಪಿಗಳನ್ನು ಪೊಲೀಸರು24 ತಾಸುಗಳಲ್ಲಿ ಬಂಧಿಸಿರುವುದು ಖುಷಿ ನೀಡಿದೆ. ಆದರೆ, ಬರಿ ಆರೋಪಿಗಳ ಬಂಧನವಾದರೆ ಸಾಲದು, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ನಮ್ಮ ಕೈಗೆ 24 ತಾಸು ಅಲ್ಲ, ಒಂದು ತಾಸು ಅಧಿಕಾರ ಕೊಟ್ಟು ನೋಡಿ, ಮಾಡಿ ತೋರಿಸುತ್ತೇವೆ’ ಎಂದು ಹೇಳಿದರು.

ADVERTISEMENT

ದುರ್ಗಾ ವಾಹಿನಿ ಪ್ರಮುಖರಾದ ಮಂಚಾಲೇಶ್ವರಿ ತೋಣಶ್ಯಾಳ ಮಾತನಾಡಿ, ‘ಕೇಂದ್ರ, ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರಗಳಿದ್ದರೂಹಿಂದುಗಳು ಬೀದಿಯಲ್ಲಿ ಹೆಣ ಇಟ್ಟುಕೊಂಡು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ನಾಚಿಕೆ ಸಂಗತಿಯಾಗಿದೆ‘ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಹಿಂದು ಯುವಕರನ್ನು ಪೋಸ್ಟ್‌ಮಾರ್ಟ್ಂಗೆ ಹಚ್ಚಿದಮತಾಂದರ ಪೋಸ್ಟ್‌ಮಾರ್ಟ್ಂಆಗಬೇಕು. ಆಗ ಹಿಂದುಗಳಿಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಹಿಂದೂಗಳ ಒಂದೇ ಒಂದು ಕೂದಲು ಕೊಂಕಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೋಡಿಕೊಳ್ಳುವ ಭರವಸೆ ನೀಡಬೇಕು. ನಿಮಗೆ ಆ ತಾಕತ್ತು, ದಮ್‌ ಇಲ್ಲವಾದರೆ ಒಮ್ಮೆ ಉತ್ತರಪ್ರದೇಶಕ್ಕೆ ಹೋಗಿ ಯೋಗಿ ಆದಿತ್ಯಾನಾಥ ಅವರ ಬಳಿ ತರಬೇತಿ ಪಡೆದುಕೊಂಡು ಬನ್ನಿ’ ಎಂದು ಸವಾಲು ಹಾಕಿದರು.

‘ಹಿಂದುಗಳು ರಕ್ತ ಹರಿಸಿ ನಿಮ್ಮನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿರುವುದುಆಪರೇಷನ್‌ ಕಮಲ ಮಾಡಲಿ ಎಂದಲ್ಲ.ನಮ್ಮ ಆಸೆ ಬಿಜೆಪಿ ಬಾವುಟ ಹಾರಿಸಬೇಕು ಎಂಬುದಲ್ಲ, ಕೇಸರಿ ಬಾವುಟ ಹಾರಿಸಬೇಕು ಎಂಬುದಾಗಿತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.