ADVERTISEMENT

ಜಾರಕಿಹೊಳಿಗೇ ಟಿಕೆಟ್; ಜಿಗಜಿಣಗಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2019, 19:47 IST
Last Updated 21 ಸೆಪ್ಟೆಂಬರ್ 2019, 19:47 IST

ವಿಜಯಪುರ: ‘ಉಪ ಚುನಾವಣೆಯಲ್ಲಿ ಗೋಕಾಕ ಕ್ಷೇತ್ರದ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರಿಗೇ ಟಿಕೆಟ್ ಕೊಡುತ್ತೇವೆ. ಅವರನ್ನು ಬಿಟ್ಟರೆ ಹೇಗೆ?, ಅವರೇ ಪಾತ್ರಧಾರಿ’ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪಕ್ಷ ಬಿಟ್ಟು ಬಂದವರಿಗೆ ನಾವು ಅನ್ಯಾಯ ಮಾಡುವುದಿಲ್ಲ. 15 ಕ್ಷೇತ್ರಗಳಲ್ಲೂ ಪ್ರಚಾರ ಮಾಡುತ್ತೇವೆ, ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುತ್ತೇವೆ’ ಎಂದರು.

‘ಅಥಣಿಯಲ್ಲೂ ನಂಬಿಕೊಂಡು ಬಂದವರಿಗೆ (ಮಹೇಶ ಕುಮಟಳ್ಳಿ) ಟಿಕೆಟ್ ಕೊಡಲಾಗುವುದು. ಲಕ್ಷ್ಮಣ ಸವದಿ ಅವರಿಗೆ ಪಕ್ಷದ ನಾಯಕರು ಪರ್ಯಾಯ ವ್ಯವಸ್ಥೆ ಮಾಡುತ್ತಾರೆ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.