ಬೆಂಗಳೂರು: ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ್ ಹಾಗೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ತಮಗೆ ಕೋವಿಡ್ ತಗುಲಿರುವುದನ್ನು ಶುಕ್ರವಾರ ಸಂಜೆ ಟ್ವಿಟರ್ ಮೂಲಕ ಖಚಿತಪಡಿಸಿರುವ ವಿಜಯೇಂದ್ರ, ‘ನನ್ನ ಕೊರೊನಾ ಪರೀಕ್ಷೆಯ ವರದಿ ಪಾಸಿಟಿವ್ ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ನಲ್ಲಿದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ವಹಿಸಿ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.