ADVERTISEMENT

ಬೆಂಗಳೂರು: ವಿಕಾಸ್‌ ಕುಮಾರ್ ಆಂತರಿಕ ಭದ್ರತೆ ಐಜಿಪಿ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 15:47 IST
Last Updated 1 ಆಗಸ್ಟ್ 2025, 15:47 IST
   

ಬೆಂಗಳೂರು: ಐಪಿಎಸ್ ಅಧಿಕಾರಿ ವಿಕಾಸ್‌ ಕುಮಾರ್ ವಿಕಾಸ್ ಅವರಿಗೆ ಆಂತರಿಕ ಭದ್ರತಾ ವಿಭಾಗದ ಐಜಿಪಿ ಹುದ್ದೆ ನೀಡಲಾಗಿದೆ.

ಆರ್‌ಸಿಬಿ ವಿಜಯೋತ್ಸವದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಿಂದ 11 ಮಂದಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಪೊಲೀಸ್‌ ಅಧಿಕಾರಿಗಳ ಜತೆಗೆ ವಿಕಾಸ್‌ ಕುಮಾರ್ ಅವರನ್ನೂ ಅಮಾನತುಗೊಳಿಸಲಾಗಿತ್ತು.

ಸರ್ಕಾರದ ಕ್ರಮವನ್ನು ಪ್ರಶ್ನಿಸಿ ವಿಕಾಸ್‌ ಕುಮಾರ್ ಅವರು ಕರ್ನಾಟಕ ಆಡಳಿತ ನ್ಯಾಯಮಂಡಳಿಯ ಮೆಟ್ಟಿಲೇರಿದ್ದರು. ನ್ಯಾಯಮಂಡಳಿಯು ಸರ್ಕಾರದ ಆದೇಶವನ್ನು ರದ್ದುಪಡಿಸಿತ್ತು. ಅಮಾನತುಗೊಂಡಿದ್ದ ಎಲ್ಲ ಪೊಲೀಸ್ ಅಧಿಕಾರಿಗಳ ಆದೇಶವನ್ನು ಕೆಲ ದಿನಗಳ ಹಿಂದೆ ಸರ್ಕಾರ ಹಿಂಪಡೆದಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.