ADVERTISEMENT

ವಿಷ್ಣುವರ್ಧನ್‌ಗೆ ‘ಕರ್ನಾಟಕ ರತ್ನ’ ಪ್ರದಾನಕ್ಕೆ ವಿಷ್ಣು ಸೇನಾ ಸಮಿತಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2026, 23:00 IST
Last Updated 12 ಫೆಬ್ರುವರಿ 2026, 23:00 IST
ವಿಷ್ಣು ಸೇನಾ ಸಮಿತಿಯ ಮುಖಂಡರು ವೀರಕಪುತ್ರ ಶ್ರೀನಿವಾಸ್‌ ನೇತೃತ್ವದಲ್ಲಿ ಜಯಮಾಲಾ ಅವರಿಗೆ ಮನವಿ ಪತ್ರ ಸಲ್ಲಿಸಿದರು
ವಿಷ್ಣು ಸೇನಾ ಸಮಿತಿಯ ಮುಖಂಡರು ವೀರಕಪುತ್ರ ಶ್ರೀನಿವಾಸ್‌ ನೇತೃತ್ವದಲ್ಲಿ ಜಯಮಾಲಾ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಬೆಂಗಳೂರು: ನಟ ವಿಷ್ಣುವರ್ಧನ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ 2025ರ ಸೆಪ್ಟೆಂಬರ್‌ನಲ್ಲಿಯೇ ಘೋಷಣೆಯಾಗಿದ್ದು, ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿಪಡಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ‘ಡಾ.ವಿಷ್ಣು ಸೇನಾ ಸಮಿತಿ’ಯು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಅವರಿಗೆ ಮನವಿ ಸಲ್ಲಿಸಿದೆ.

ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ ವಿಷ್ಣು ಸೇನಾ ಸಮಿತಿಯ ಮುಖಂಡರು ಜಯಮಾಲಾ ಅವರನ್ನು  ಗುರುವಾರ ಭೇಟಿ ಮಾಡಿದ್ದರು. ‘ವಿಷ್ಣುವರ್ಧನ್‌ ಅವರಿಗೆ ಪ್ರಶಸ್ತಿ ಘೋಷಣೆಯಾಗಿ ಆರು ತಿಂಗಳು ಕಳೆದರೂ, ಸಮಾರಂಭದ ದಿನಾಂಕ ಘೋಷಣೆಯಾಗಿಲ್ಲ. ಈ ಬಗ್ಗೆ ಸರ್ಕಾರದ ಜತೆ ಮಾತುಕತೆ ನಡೆಸಿ, ಸಮಾರಂಭ ಆಯೋಜಿಸಬೇಕು’ ಎಂದು ಮನವಿ ಸಲ್ಲಿಸಿದ್ದಾರೆ.

‘ಅಭಿಮಾನ್‌ ಸ್ಟುಡಿಯೊದಲ್ಲಿ ಇದ್ದ ವಿಷ್ಣುವರ್ಧನ್‌ ಅವರ ಸ್ಮಾರಕವನ್ನು ತೆರವುಗೊಳಿಸಲಾಗಿದೆ. ಆ ಜಾಗದಲ್ಲಿ ಮಾಲ್‌, ವಾಣಿಜ್ಯ ಸಂಕೀರ್ಣ ನಿರ್ಮಾಣವಾಗುವುದು ವಿಷ್ಣುವರ್ಧನ್‌ ಅವರಿಗೆ ಮಾಡುವ ಅವಮಾನ. ಹೀಗಾಗಿ ಆ ಜಾಗವು ಮೂಲ ಉದ್ದೇಶಕ್ಕೇ ಬಳಕೆಯಾಗುವಂತೆ ಮಂಡಳಿಯು ಎಚ್ಚರಿಕೆ ವಹಿಸಬೇಕು’ ಎಂದು ಮನವಿ ಸಲ್ಲಿಸಿದ್ದಾರೆ.

ADVERTISEMENT

ವಿಷ್ಣು ಸೇನಾ ಸಮಿತಿಯ ಆನಂದ ರಾಜ್‌, ಮಲ್ಲಿಕಾರ್ಜುನ್‌, ಎಸ್‌.ರಘು ಮತ್ತು ಮೂರ್ತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.