ಮೈಸೂರು: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ವಿಶ್ವನಾಥ್ ಅವರು, ಚಾಮರಾಜನಗರದ ನೂತನ ಸಂಸದ ಹಾಗೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರೂ ಆಗಿರುವ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಮೈಸೂರಿನ ನಿವಾಸದಲ್ಲಿ ಬುಧವಾರ ಭೇಟಿಯಾಗಿದ್ದಾರೆ.
ಚುನಾವಣೆ ಫಲಿತಾಂಶದ ಬಳಿಕ ಇಬ್ಬರೂ ಭೇಟಿಯಾಗಿರಲಿಲ್ಲ. ಪ್ರಸಾದ್ ಮನೆಗೆ ತೆರಳಿದ ವಿಶ್ವನಾಥ್, ಲೋಕಸಭೆ ಚುನಾವಣೆಯಲ್ಲಿನ ಗೆಲುವಿಗಾಗಿ ಅಭಿನಂದನೆ ಸಲ್ಲಿಸಿದರು ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.