ADVERTISEMENT

ಮಂಗಳೂರು: ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಜುಲೈ 11ರಂದು ಹಸಿರು ನಿಶಾನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 16:56 IST
Last Updated 10 ಜುಲೈ 2021, 16:56 IST

ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಅನುಕೂಲವಾಗುವಂತೆ ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಜುಲೈ 11ರಂದು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗುತ್ತದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ರೈಲ್ವೆ ಅಧಿಕಾರಿಗಳು ಭಾಗವಹಿಸಲಿದ್ದಾರೆ. ವಿಸ್ಟಾಡೋಮ್‌ ಬೋಗಿ ಮಂಗಳೂರಿಗೆ ಬಂದಿದ್ದು, ಉದ್ಘಾಟನೆಗಾಗಿ ಬೋಗಿಯನ್ನು ಶೃಂಗರಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.