ADVERTISEMENT

ಬೆಳಗಾವಿ: ಮತ ವಿಭಜನೆ ಆಗಿದೆ ಎಂದ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2021, 9:03 IST
Last Updated 14 ಡಿಸೆಂಬರ್ 2021, 9:03 IST
ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ
ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ   

ಬೆಳಗಾವಿ: ಈ ಚುನಾವಣೆಯಲ್ಲಿ ಬಿಜೆಪಿಯು ಸಂಘಟಿತ ಪ್ರಯತ್ನ ಮಾಡಿದೆ. ಹೀಗಾಗಿ ವಿಫಲ ಆಗಿದೆ ಎನ್ನುವುದಿಲ್ಲ‌ ಎಂದು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಹೇಳಿದರು.

ನಾನು ಮೊದಲ ಪ್ರಾಶಸ್ತ್ಯದ ಮತಗಳಿಂದ ಗೆಲ್ಲಲಾಗಿಲ್ಲ. ನಮ್ಮ ಮತಗಳು ವಿಭಜನೆ ಆಗಿವೆ. ಅಧಿಕೃತ ಅಭ್ಯರ್ಥಿ ಇದ್ದಾಗ ಇನ್ನೊಬ್ಬ ಅಭ್ಯರ್ಥಿ ಹಾಕುವ ಅಗತ್ಯವಿರಲಿಲ್ಲ. ಆದರೆ, ಎರಡನೇ ಪ್ರಾಶಸ್ತ್ಯದ ಮತಗಳ ಎಣಿಕೆ ಪ್ರಗತಿಯಲ್ಲಿರುವುದರಿಂದ ಈಗಲೂ ನನಗೆ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ಈ ನಡುವೆ, ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಗೆದ್ದಿದ್ದಾರೆ ಎಂದು ಭಾವಿಸಿ ಅಭಿಮಾನಿಗಳು ಸಂಭ್ರಮ ಆಚರಿಸುತ್ತಿದ್ದಾರೆ.‌

ADVERTISEMENT

ಜಿಲ್ಲಾ ಚುನಾವಣಾ ಅಧಿಕಾರಿಯು ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿಲ್ಲ. ಇನ್ನೂ ಪ್ರಕ್ರಿಯೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.