ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಆನೆಗುಂದಿಯಲ್ಲಿ ವ್ಯಾಸರಾಯರ ವೃಂದಾವನವನ್ನು ಧ್ವಂಸಗೊಳಿಸಿರುವ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರುಬಂಧಿಸಿದ್ದಾರೆ.ಪ್ರಕರಣದ ಆರೋಪಿಗಳಿಬ್ಬರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ವೃಂದಾವನವನ್ನು ನಾಶ ಪಡಿಸಲು ಬಳಸಲಾದ ಹಾರೆಗಳು,ಸುತ್ತಿಗೆ, ಬುಟ್ಟಿ ಹಾಗೂ ಪಿಕಾಸಿ, ಆಂಧ್ರಪ್ರದೇಶದ ನೋಂದಣಿ ಸಂಖ್ಯೆ ಇರುವ ಇನೋವ ಕಾರನ್ನು ಜಪ್ತಿ ಮಾಡಲಾಗಿದೆ. ನಿಧಿಗಾಗಿ ವ್ಯಾಸರಾಜರವೃಂದಾವನವನ್ನು ಧ್ವಂಸ ಮಾಡಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ ಪೊಲೀಸರು.
ಇದನ್ನೂ ಓದಿ...ಆನೆಗೊಂದಿ: ವ್ಯಾಸರಾಜರ ವೃಂದಾವನ ಮರುಪ್ರತಿಷ್ಠಾಪನೆ
ಬಂಧಿತರಾಗಿರುವ ಆರೋಪಿಗಳು ಅಂತರ ರಾಜ್ಯ ನಿಧಿಗಳ್ಳರು ಎನ್ನಲಾಗಿದೆ. ಈ ಪ್ರಕರಣದತನಿಖೆ ನಡೆಸಲು 5 ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿತ್ತು.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.