ADVERTISEMENT

ವಿಟಿಯು ಪರೀಕ್ಷೆ ರದ್ದು ಇಲ್ಲ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 16:59 IST
Last Updated 20 ಏಪ್ರಿಲ್ 2021, 16:59 IST

ರಾಮನಗರ: ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೊದಲ ಸೆಮಿಸ್ಟರ್‌ ಎಂಜಿನಿಯರಿಂಗ್‌ ಪರೀಕ್ಷೆಗಳನ್ನು ರದ್ದು ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಉನ್ನತಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

‘ವಿಶ್ವವಿದ್ಯಾಲಯದ ಬಹುತೇಕ ಸೆಮಿಸ್ಟರ್ ಪರೀಕ್ಷೆಗಳು ಈಗಾಗಲೇ ಮುಗಿದಿದ್ದು, ಇದೊಂದು ಮಾತ್ರ ಬಾಕಿ ಇದೆ. ಪರೀಕ್ಷೆ ರದ್ದುಗೊಳಿಸಿದರೆ ವಿದ್ಯಾರ್ಥಿಗಳ ಮೂರ್ನಾಲ್ಕು ತಿಂಗಳ ಶ್ರಮ ವ್ಯರ್ಥ ಆಗುತ್ತದೆ. ಮೊದಲ ಸಮಿಸ್ಟರ್‌ನಲ್ಲಿ ಪರೀಕ್ಷೆ ಬರೆಯಲು ಆಗದ ವಿದ್ಯಾರ್ಥಿಗಳಿಗೆ ಮುಂದಿನ ಸೆಮಿಸ್ಟರ್‌ಗೆ ಅವಕಾಶ ನೀಡಲಾಗುವುದು’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT