ADVERTISEMENT

’ಅವಕಾಶ ಸಿಕ್ಕರೆ ನಾನೂ ಮುಖ್ಯಮಂತ್ರಿಯಾಗುವೆ’

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2019, 12:36 IST
Last Updated 8 ಡಿಸೆಂಬರ್ 2019, 12:36 IST
ಎಸ್.ಆರ್.ಪಾಟೀಲ
ಎಸ್.ಆರ್.ಪಾಟೀಲ   

ಬೆಳಗಾವಿ: ‘ಅವಕಾಶ ಸಿಕ್ಕರೆ ಮುಖ್ಯಮಂತ್ರಿಯಾಗಲು ಸಿದ್ಧವಿದ್ದೇನೆ’ ಎಂದು ವಿಧಾನ ಪರಿಷತ್ ವಿರೋಧಪಕ್ಷದ ನಾಯಕ ಎಸ್.ಆರ್. ಪಾಟೀಲ ತಿಳಿಸಿದರು.

ಭಾನುವಾರ ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಾಜ್ಯದ15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 12 ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ. ಕಾಂಗ್ರೆಸ್‌ ಪಕ್ಷಕ್ಕೆ ದ್ರೋಹಮಾಡಿ ಹೋದ ಅನರ್ಹ ಶಾಸಕರಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ.ಕಾಂಗ್ರೆಸ್ ಹಾಗೂ ಬಿಜೆಪಿ ಮತಗಳು ಅನರ್ಹರಿಗೆ ಸಿಕ್ಕಿರುವುದಿಲ್ಲ’ ಎಂದರು.

‘ಉಪ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ಸರ್ಕಾರ ಬೀಳಲಿದೆ. ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದವರು ಮುಖ್ಯಮಂತ್ರಿ ಆಗಲಿದ್ದಾರೆ. ನಾನೂ ಸಿದ್ಧವಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.