ADVERTISEMENT

ರೈತರ ಜಮೀನು ವಶಪಡಿಸಿಕೊಳ್ಳಲು ವಕ್ಫ್ ಬೋರ್ಡ್ ನೋಟಿಸ್: BY ವಿಜಯೇಂದ್ರ ಕಿಡಿ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2024, 15:19 IST
Last Updated 26 ಅಕ್ಟೋಬರ್ 2024, 15:19 IST
<div class="paragraphs"><p>ವಿಜಯೇಂದ್ರ ಹಾಗೂ  ಸಿದ್ದರಾಮಯ್ಯ</p></div>

ವಿಜಯೇಂದ್ರ ಹಾಗೂ ಸಿದ್ದರಾಮಯ್ಯ

   

ಬೆಂಗಳೂರು: ತಲೆಮಾರುಗಳಿಂದ ಸಾಗುವಳಿ ಮಾಡುತ್ತಿರುವ ನಮ್ಮ ರೈತರಿಗೆ-ವಕ್ಫ್ ಮಂಡಳಿಯು ನೋಟೀಸ್ ಜಾರಿ ಮಾಡಿ ಅವರ ಭೂಮಿ ವಶಪಡಿಸಿಕೊಳ್ಳುವುದರ ವಿರುದ್ಧ ಬಿಜೆಪಿ ಹೋರಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೇಳಿದ್ದಾರೆ.

ವಿಜಯಪುರ ಜಿಲ್ಲಾ ವಕ್ಫ್ ಅಧಿಕಾರಿ ರೈತರಿಬ್ಬರಿಗೆ ವಕ್ಫ್ ಭೂಮಿ ಸಂಬಂಧ ನೋಟಿಸ್ ಜಾರಿ ಮಾಡಿದ್ದರ ಪ್ರತಿ ಹಂಚಿಕೊಂಡು ಅವರು ಇಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಈ ಕುರಿತು ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ADVERTISEMENT

ತಲತಲಾಂತರದಿಂದ ಕೃಷಿ ಮಾಡಿಕೊಂಡು ಬರುತ್ತಿದ್ದ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ ವಶಪಡಿಸಿಕೊಳ್ಳಲು ನೋಟಿಸ್‌ ನೀಡಿರುವುದು ಖಂಡನೀಯ ಎಂದು ಹೇಳಿದ್ದಾರೆ.

ಭೂಮಿ ಕೊಳ್ಳೆ ಹೊಡೆಯಲು ವಕ್ಫ್‌ ಬೋರ್ಡ್‌ ಜೊತೆ ಕಾಂಗ್ರೆಸ್ ಸರ್ಕಾರ ಶಾಮೀಲಾಗಿದೆ. ವಕ್ಫ್‌ ಕಾಯ್ದೆಯನ್ನು ಮುಂದಿರಿಸಿಕೊಂಡು ರೈತರ ಭೂಮಿಗಳನ್ನು ವಶಪಡಿಸಿಕೊಳ್ಳಬಾರದು. ಇದರ ವಿರುದ್ಧ ಹಾಗೂ ರೈತರ ಪರ ಬಿಜೆಪಿ ಧ್ವನಿ ಎತ್ತಲಿದೆ ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.