ADVERTISEMENT

ಮುರುಘಾ ಶರಣರ ವಿರುದ್ಧ ಬಂಧನದ ವಾರೆಂಟ್ ಆದೇಶ: ವಿರಕ್ತಮಠಕ್ಕೆ ಪೊಲೀಸ್ ಭದ್ರತೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2023, 8:30 IST
Last Updated 20 ನವೆಂಬರ್ 2023, 8:30 IST
   

ದಾವಣಗೆರೆ: ಎರಡನೇ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಇಲ್ಲಿನ ವಿರಕ್ತ ಮಠಕ್ಕೆ ಪೊಲೀಸರು ಕಣ್ಗಾವಲು ಇರಿಸಿದ್ದಾರೆ.

ಶರಣರು ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಿದ್ದು, ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಆಗಮಿಸಿದ್ದಾರೆ.

ಶಿವಮೂರ್ತಿ ಶರಣರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರಿಗೆ ಮಂಗಳವಾರದವರೆಗೆ ಕಾಲಾವಕಾಶ ನೀಡಿ ನ್ಯಾಯಾಧೀಶೆ ಬಿ.ಕೆ.ಕೋಮಲಾ ಅವರು ಸೋಮವಾರ ಆದೇಶ ಪ್ರಕ್ರಟಿಸಿದ್ದು, ಪೊಲೀಸರು ಯಾವುದೇ ಕ್ಷಣದಲ್ಲಾದರೂ ಬಂಧಿಸುವ ಸಾಧ್ಯತೆ ಇದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.