ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ನಲ್ಲಿ ನೀರಾವರಿಗೆ ₹17 ಸಾವಿರ ಕೋಟಿ ಅನುದಾನ ನೀಡಲಾಗಿದೆ. ರಾಜ್ಯದಾದ್ಯಂತಕೆರೆಗಳನ್ನು ತುಂಬಿಸುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ನಲ್ಲಿ ತಿಳಿಸಿದ್ದಾರೆ.
ಏತ ನೀರಾವರಿ ಯೋಜನೆಗಳಿಗೆ ₹ 1563 ಕೋಟಿ ರೂಗಳನ್ನು ಮೀಸಲಿಡಲಾಗಿದೆ. ಕೆರೆ ತುಂಬಿಸುವುದು ಸೇರಿದಂತೆ ಕೆರೆ ಅಭಿವೃದ್ಧಿ ಯೋಜನೆಗಳಿಗೆ ಒಟ್ಟು 2 ಸಾವಿರ ಕೋಟಿ ರೂಪಾಯಿ, ಕಾಲುವೆಗಳ ಅಭಿವೃದ್ಧಿ ಮತ್ತು ಬ್ಯಾರೆಜ್ ನಿರ್ಮಾಣಕ್ಕೆ ಸಾವಿರ ಕೋಟಿ ರೂಪಾಯಿ ತೆಗೆದಿರಿಸಲಾಗಿದೆ. ನದಿಗಳ ಪುನಶ್ಚೇತನ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿ ನೀಡಲಾಗಿದೆ.
ಶಿವಮೊಗ್ಗ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿನ ಕೆರೆಗಳ ಸುಧಾರಣೆಗೆ ಮುಂದಿನ 3 ವರ್ಷಗಳಲ್ಲಿ ₹300 ಕೋಟಿ ಅನುದಾನ ನೀಡಲಾಗಿದೆ. ಕೆ.ಸಿ.ವ್ಯಾಲಿ ಅಭಿವೃದ್ಧಿಗೆ 40 ಕೋಟಿ ರೂಪಾಯಿ ನೀಡಲಾಗಿದೆ.
ಅಂತರ್ಜಲ ಕುಸಿತವಾಗಿರುವ ತಾಲ್ಲೂಕುಗಳಲ್ಲಿ ಅಂತರ್ಜಲ ವೃದ್ಧಿಸಲು ಚೆಕ್ ಡ್ಯಾಂ ಮತ್ತು ಬ್ಯಾರೇಜ್ ನಿರ್ಮಾಣ ಹಾಗೂನೀರು ಮರುಪೂರಣಕ್ಕೆ ₹200 ಕೋಟಿ ತೆಗೆದಿರಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.