ADVERTISEMENT

ಸಿದ್ದರಾಮಯ್ಯಗೂ ಏಕವಚನ ಬಳಸಬೇಕಾಗುತ್ತದೆ: ಶೆಟ್ಟರ್ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2019, 9:53 IST
Last Updated 24 ಅಕ್ಟೋಬರ್ 2019, 9:53 IST
ಜಗದೀಶ ಶೆಟ್ಟರ್ ಹಾಗೂ ಸಿದ್ದರಾಮಯ್ಯ
ಜಗದೀಶ ಶೆಟ್ಟರ್ ಹಾಗೂ ಸಿದ್ದರಾಮಯ್ಯ   

ಹುಬ್ಬಳ್ಳಿ: ‘ಸ್ಪೀಕರ್‌ಸ್ಥಾನದ ಘನತೆ ಮರೆತು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅವನು, ಇವನು ಎಂದು ಮಾನತಾಡಿರುವ ಸಿದ್ದರಾಮಯ್ಯ ಅವರಿಗೂ ಇನ್ನು ಮುಂದೆ ಏಕವಚನ ಬಳಸಬೇಕಾಗುತ್ತದೆ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಎಚ್ಚರಿಕೆ ನೀಡಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿಯಾಗಿ ಕೆಲಸ ಮಾಡಿರುವ ಸಿದ್ದರಾಮಯ್ಯ, ಈ ರೀತಿ ಮಾತನಾಡುವುದನ್ನು ನೋಡಿದರೆ ಅವರಿಗೆ ಮನೋರೋಗ ಇರಬೇಕು’ ಎಂದರು.

‘ಸ್ಪೀಕರ್‌ ಬಗ್ಗೆ ಇಷ್ಟೊಂದು ಕೀಳಾಗಿ ಮಾತನಾಡಿರುವವರನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ. ಸಿದ್ದರಾಮಯ್ಯ ಅವರ ಈ ಸೊಕ್ಕು ಹೆಚ್ಚು ದಿನ ನಡೆಯುವುದಿಲ್ಲ. ಕೂಡಲೇ ಅವರು, ಸ್ಪೀಕರ್ ಕ್ಷಮೆ ಕೋರಬೇಕು’ ಎಂದು ಆಗ್ರಹಿಸಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.