ADVERTISEMENT

ರಾಮಲಿಂಗಾರೆಡ್ಡಿ ನಿರ್ಧಾರ ಆಘಾತ ತಂದಿದೆ: ಎಂಟಿಬಿ ನಾಗರಾಜ್

​ಪ್ರಜಾವಾಣಿ ವಾರ್ತೆ
Published 19 ಜುಲೈ 2019, 6:31 IST
Last Updated 19 ಜುಲೈ 2019, 6:31 IST
   

ಬೆಂಗಳೂರು: ರಾಜೀನಾಮೆ‌ ವಾಪಸ್ ಪಡೆದ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಅವರ ನಿರ್ಧಾರದಿಂದ ನಮಗೆ ಆಘಾತವಾಗಿದೆ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ರಾಮಲಿಂಗಾರೆಡ್ಡಿ ನಾಯಕತ್ವದಲ್ಲಿಯೇ ಬೆಂಗಳೂರು ಶಾಸಕರ ಸಭೆ ನಡೆದಿತ್ತು. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯರನ್ನು ಕಡೆಗಣಿಸಲಾಗಿದ್ದು ನಾವೆಲ್ಲರೂ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದೆವು. ಇದೀಗ ರಾಮಲಿಂಗಾರೆಡ್ಡಿ ತಮ್ಮ ತೀರ್ಮಾನದಿಂದ‌ ಹಿಂದೆ ಸರಿದಿರುವುದು‌ ನಮಗೆ ಆಘಾತ‌ ಉಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ.

ನಾವು ನಮ್ಮ‌ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ನಾಗರಾಜ್ ಸ್ಪಷ್ಟಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.