ADVERTISEMENT

ವಿಧಾನ ಪರಿಷತ್: ಜೆಡಿಎಸ್ ಅಭ್ಯರ್ಥಿಗಳು ಇಲ್ಲದ ಕಡೆ ಬೆಂಬಲ ಕೇಳಿದ್ದೇವೆ –ಬಿಎಸ್‌ವೈ

ಕರ್ನಾಟಕದಲ್ಲಷ್ಟೆ ಕಾಂಗ್ರೆಸ್ ಸ್ವಲ್ಪ ಉಸಿರಾಡುತ್ತಿದೆ ಎಂದು ವ್ಯಂಗ್ಯವಾಡಿದ ಮಾಜಿ ಸಿಎಂ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2021, 9:36 IST
Last Updated 5 ಡಿಸೆಂಬರ್ 2021, 9:36 IST
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ   

ಚಾಮರಾಜನಗರ: 'ದೇಶದೆಲ್ಲೆಡೆ ಬಿಜೆಪಿ ಪರ ಅಲೆಯಿದ್ದು, ಕರ್ನಾಟಕದಲ್ಲಷ್ಟೆ ಕಾಂಗ್ರೆಸ್ ಸ್ವಲ್ಪ ಉಸಿರಾಡುತ್ತಿದೆ' ಎಂದು ಬಿಜೆಪಿ ಶಾಸಕ ಬಿ.ಎಸ್.ಯಡಿಯೂರಪ್ಪ ಅವರು ವ್ಯಂಗ್ಯವಾಡಿದರು.

ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಸಂತೇಮರಹಳ್ಳಿಗೆ ಬಂದಿದ್ದ ಸಂದರ್ಭದಲ್ಲಿ ‌ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಕಾಂಗ್ರೆಸ್ ಪಕ್ಷವು ಲೋಕಸಭೆಯಲ್ಲಿ ಇನ್ನೂ 20ವರ್ಷ ಪ್ರತಿ ಪಕ್ಷದ ಸ್ಥಾನದಲ್ಲಿ ಕೂರಲಿದೆ.ಇಡೀ ಜಗತ್ತೇ ಪ್ರಧಾನಿ ಮೋದಿ ಅವರನ್ನು ಕೊಂಡಾಡುತ್ತಿದ್ದು, ಕಾಂಗ್ರೆಸ್ ನವರು ಪ್ರಧಾನಿ ಬಗ್ಗೆ ಮಾತನಾಡುವ ಮುನ್ನ ಯೋಚಿಸಬೇಕು' ಎಂದರು.

15-17 ಸ್ಥಾನ ಖಚಿತ: 'ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿಬಿಜೆಪಿ ಪರ ಒಲವು ವ್ಯಕ್ತವಾಗುತ್ತಿದೆ‌. ಜೆಡಿಎಸ್ ಅಭ್ಯರ್ಥಿಗಳು ಇಲ್ಲದ ಕಡೆಗಳಲ್ಲಿ ಅವರ ಬೆಂಬಲ ಕೇಳಿದ್ದೇವೆ. 15ರಿಂದ 17 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ' ಎಂದು ಯಡಿಯೂರಪ್ಪ ಅವರು ಹೇಳಿದರು.

ADVERTISEMENT

ಕಾಂಗ್ರೆಸ್ ಮುಖಂಡರು ಮಾಡುತ್ತಿರುವ 40 ಪರ್ಸೆಂಟ್ ಸರ್ಕಾರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, 'ಚುನಾವಣಾ ಫಲಿತಾಂಶವೇ ಅವರ ಟೀಕೆಗೆ ಉತ್ತರ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.