ಬೆಂಗಳೂರು: ಉಪಚುನಾವಣೆ ಫಲಿತಾಂಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇವೆ, ನಾವುಈ ಸೋಲನ್ನು ಒಪ್ಪಿಕೊಂಡಿದ್ದೇವೆ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು ಜನರು ಅನರ್ಹರನ್ನು ಒಪ್ಪಿಕೊಂಡಿದ್ದಾರೆ, ನಾವು ಸೋಲನ್ನು ಒಪ್ಪಿಕೊಂಡಿದ್ದೇವೆ ಎಂದು ಶಿವಕುಮಾರ್ ಹೇಳಿದ್ದಾರೆ.
ನಾವು ಈ ಚುನಾವಣೆ ಫಲಿತಾಂಶದಿಂದ ಹತಾಶರಾಗುವುದಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.